ಕೊರೋನಾದಿಂದ ಪಾರು ಮಾಡೋಕೆ ಕಣ್ಣೀರಿಡುತ್ತ ಶಿವಣ್ಣನ ಸಹಾಯ ಕೋರಿದ ಖ್ಯಾತ ನಟಿ ವಿಜಯಲಕ್ಷ್ಮಿ: ತಮಿಳುನಾಡಿನಲ್ಲಿ ಆಕೆಯ ಜೊತೆ ನಡೆದ ಘಟನೆ ನಿಜಕ್ಕೂ ಶೋಚನೀಯವೇ ಸರಿ

in FILM NEWS/Kannada News/News 880 views

ಬೆಂಗಳೂರು: ಸಹೋದರಿ ಉಷಾದೇವಿ ಆರೋಗ್ಯ ಗಂಭೀರವಾದ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ಗಣ್ಯರು ವಿಶೇಷವಾಗಿ ಶಿವರಾಜ್ ಕುಮಾರ್ ಬಳಿ ಸಹಾಯ ಮಾಡಿ ಎಂದು ನಟಿ ವಿಜಯಲಕ್ಷ್ಮಿ ವೀಡಿಯೋ ಮಾಡಿ ಮನವಿ ಮಾಡಿದ್ದಾರೆ.

Advertisement

ತಮಿಳುನಾಡಿನಲ್ಲಿ ನೆಲೆಸಿರುವ ನಟಿ ವಿಜಯಲಕ್ಷ್ಮಿ ಇದೀಗ ತಾವು ಸಂಕಷ್ಟಕ್ಕೆ ಸಿಲುಕಿದ್ದು ಯಾರು ಸಹಾಯಕ್ಕೆ ಮುಂದೆ ಬರುತ್ತಿಲ್ಲ. ಅಲ್ಲದೆ ನಾನು ಕನ್ನಡಿಗಳೆಂದು ನಮಗೆ ಯಾರು ಸಹಾಯ ಮಾಡುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ವಿಡಿಯೋ ಮೂಲಕ ಮಾತನಾಡಿರುವ ನಟಿ, ಕೊರೋನಾ ಸಮಯದಲ್ಲಿ ನನ್ನ ಅಕ್ಕ ಉಷಾ ಆರೋಗ್ಯ ಹದಗೆಟ್ಟಿದೆ. ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಲು ನನ್ನಿಂದ ಆಗುತ್ತಿಲ್ಲ. ಯಾವುದೇ ನಟರು ಸಹಾಯಕ್ಕೆ ಮುಂದೆ ಬರುತ್ತಿಲ್ಲ ಎಂದು ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ಇದಕ್ಕೆಲ್ಲ ಕಾರಣ ನಟ, ನಿರ್ದೇಶಕ, ರಾಜಕೀಯ ಮುಖಂಡ ಸೀಮನ್ ಎಂದು ವಿಜಯಲಕ್ಷ್ಮಿ ಆರೋಪಿಸಿದ್ದಾರೆ. ಹೌದು ಸೀಮಾನ್ ಇಲ್ಲಿ ಸಂಘಟನೆ ಕಟ್ಟಿಕೊಂಡು ಕನ್ನಡಿಗರ ಮೇಲೆ ದ ಬ್ಬಾ ಳಿ ಕೆ ಮಾಡುತ್ತಿದ್ದಾನೆ. ಕನ್ನಡಿಗರಿಗೆ ಅ ವ ಹೇ‌ ಳ ನ ಮಾಡುತ್ತಿದ್ದಾನೆ. ನಾನು ಸಹ ಕನ್ನಡದವಳು ಎನ್ನು ಕಾರಣಕ್ಕೆ ತಮಿಳುನಾಡಿನಲ್ಲಿ ಯಾರು ಸಹಾಯಕ್ಕೆ ಬರುತ್ತಿಲ್ಲ ಎಂದು ಹೇಳಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಹಲವು ನಟರು ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಹಣ ನೀಡಿದ್ದಾರೆ. ಆದರೆ ನನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ. ಇದಕ್ಕೆ ಕಾರಣ ಸೀಮನ್. ನಾನು ಕನ್ನಡದಳು ಕರ್ನಾಟಕದವಳು ಎಂಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾನೆ. ರಜನಿ ಅವರನ್ನು ರಾಜಕೀಯಕ್ಕೆ ಬರದಂತೆ ಮಾಡಿದ ರೀತಿ ನಿಮ್ಮನ್ನೂ ಕರ್ನಾಟಕಕ್ಕೆ ಓಡಿಸುತ್ತೇನೆ ಎನ್ನುತ್ತಿದ್ದಾನೆ. ಸೀಮನ್ ಜೊತೆ ಎರಡು ವರ್ಷ ಇದ್ದು ಸಾಕಾಗಿದೆ ಎಂದು ಹೇಳಿದ್ದಾರೆ.

ಸಹೋದರಿ ಉಷಾದೇವಿ ಆರೋಗ್ಯ ಗಂ ಭೀ ರವಾಗಿದೆ. ಗ ರ್ಭಾ ಶ ಯ ದ ತೊಂದರೆಯಿಂದ ಚೆನ್ನೈ ಒಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಆ ಚಿಕಿತ್ಸೆ ಫಲಕಾರಿಯಾಗದೇ ಉಷಾರನ್ನ ಸಾವು ಬದುಕಿನ ನಡುವೆ ಹೋರಾಡುವಂತೆ ಮಾಡಿದೆ. ಹಣವೆಲ್ಲ ಈಗಾಗಲೇ ಚಿಕಿತ್ಸೆಗಾಗಿ ಖರ್ಚಾಗಿದೆ. ಜೊತೆಗೆ ಏನು ಮಾಡಬೇಕೆಂದು ತಿಳಿಯುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಸದ್ಯ ಚೆನ್ನೈನಲ್ಲಿ ಇದ್ದೇನೆ. ಲಾಕ್‍ಡೌನ್ ಆದ್ಮೇಲೆ ಬೆಂಗಳೂರಿಗೆ ಬರ್ತೀನಿ. ಮುಂದೆ ಏನು ಮಾಡಬೇಕು ಎಂದು ನನಗೆ ತಿಳಿಯುತ್ತಿಲ್ಲ. ಶಿವಣ್ಣ ಅವರು ನನಗೆ ಸಹಾಯ ಮಾಡಿ. ಉಷಾ ಅವರ ಸ್ಥಿತಿ ಗಂಭಿರವಾಗಿದೆ ಎಂದು ಈ ಬಗ್ಗೆ ವಿಡಿಯೋ ಮಾಡಿರುವ ನಟಿ ವಿಜಯಲಕ್ಷ್ಮಿ ಶಿವರಾಜ್ ಕುಮಾರ್ ಸಹಾಯ ಕೇಳಿಕೊಂಡಿದ್ದಾರೆ.

ಉಷಾರಿಗೆ ಮಾಡಲಾದ ಆಪರೇಶನ್ ಫೇಲ್ಯೂರ್ ಆಗಿ ಅದರಿಂದ ಆರೋಗ್ಯದ ತೊಡಕು ಉಂಟಾಗಿದೆ. ಮುಂದೇನು ಮಾಡುವುದು ಎಂಬುದು ತಿಳಿದಿಲ್ಲ ಎಂಬುದಾಗಿ ಹೇಳಿರುವ ವಿಜಯಲಕ್ಷ್ಮಿ ಅವರಿಗೆ ಶಿವಣ್ಣ ಸಹಾಯ ಮಾಡುತ್ತಾರಾ ಅಥವಾ ಕನ್ನಡ ಚಿತ್ರರಂಗದ ಯಾರಾದರೂ ಸಹಾಯ ಮಾಡಬಹುದೇ ಎಂಬುದನ್ನು ಕಾದು ನೋಡಬೇಕಾಗಿದೆ.

ಈ ಹಿಂದೆ ನಟಿ ವಿಜಯಲಕ್ಷ್ಮಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿತ್ರರಂಗದ ಸಹಾಯ ಹಸ್ತ ಚಾಚಿದ್ದರು. ತಾಯಿಗೆ ಆರೋಗ್ಯ ಸಮಸ್ಯೆ ಆಗಿತ್ತು. ಈಗ ಸಡನ್ ಆಗಿ ನನ್ನ ತಂಗಿ ವಿಜಯಲಕ್ಷ್ಮಿ ಹೀಗೆ ಆನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಇದ್ದ ಹಣವೆಲ್ಲ ತಾಯಿಯ ಚಿಕಿತ್ಸೆಗೆ ಖರ್ಚು ಮಾಡಿದ್ದೇವೆ. ಈಗ ನಮಗೆ ಇಂಡಸ್ಟ್ರಿಯ ಸಹಾಯ ಬೇಕಿದೆ ಎಂದು ವಿಜಯಲಕ್ಷ್ಮಿ ಅವರ ತಂಗಿ ಉಷಾದೇವಿ  ಕಣ್ಣೀರು ಹಾಕಿದ್ದರು. ಇದೀಗ ಉಷಾದೇವಿ ಅವರಿಗಾಗಿ ನಟಿ ಸಹಾಯ ಕೇಳುತ್ತಿದ್ದಾರೆ.

ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಸ್ಯಾಂಡಲ್‍ವುಡ್ ನಟರಾದ ಕಿಚ್ಚ ಸುದೀಪ್ ಅವರು ಸಹಾಯ ಮಾಡಿದ್ದರು. ಇದೀಗ ಶಿವಣ್ಣ ಬಳಿ ಸಹಾಯವನ್ನು ಕೇಳಿದ್ದಾರೆ.

Advertisement
Share this on...