ಕೋಟಿ ರಾಮು ಬಳಿಕ ಕಳಚಿತು ಸ್ಯಾಂಡಲ್‌ವುಡ್‌ನ ಮತ್ತೊಂದು ಕೊಂಡಿ: ಬಿಕ್ಕಿಬಿಕ್ಕಿ ಕಣ್ಣೀರಿಟ್ಟ ಪುನೀತ್ ರಾಜಕುಮಾರ್

in FILM NEWS/Kannada News/News/ಸಿನಿಮಾ 564 views

ಬೆಂಗಳೂರು: ಕೊರೊನಾ ಹಾವಳಿ ಎಲ್ಲೆಡೆ ಹೆಚ್ಚಳವಾಗುತ್ತಲೇ ಇದೆ. ದಿನದಿಂದ ದಿನಕ್ಕೆ ಸಾವಿನ ಸಂ‌ಖ್ಯೆಯೂ ಹೆಚ್ಚಾಗುತ್ತಲೇ ಇದೆ. ಯಾವುದೂ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಅತ್ತ ಸ್ಯಾಂಡಲ್ ವುಡ್ ನಲ್ಲಿ ಯಾವ ಸಿನಿಮಾ ನಿರ್ಮಾಣದ ಕಾರ್ಯವಾಗಲೀ, ಬಿಡುಗಡೆಯಾಗಲೀ ಆಗುತ್ತಿಲ್ಲ. ಹಾಗಾಗಿ ಸಿನಿಮಾಗೆ ಸಂಬಂಧಿಸಿದ ಯಾವುದೇ ಕೆಲಸ ಸಾಗದೇ ಸಿನಿಮಾಗಳನ್ನೇ ನಂಬಿಕೊಂಡವರು ಇಂದು ಬೀದಿಗೆ ಬೀಳುವ ಸಂದರ್ಭ ಎದುರಾಗಿದೆ.

Advertisement

ಕೋಟಿ ರಾಮು ಅವರಂತಹ ದೊಡ್ಡ ದೊಡ್ಡ ನಿರ್ಮಾಪಕರೇ ಸಾವಿಗೀಡಾಗುತ್ತಿದ್ದಾರೆ. ಚಿತ್ರರಂಗದ ಅನ್ನದಾತರೆನಿಸಿದ ರಾಮು ಅವರು ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗ ಚಿಕಿತ್ಸೆ ಫಲಕಾರಿಯಾಗದೇ ಸಾ ವ ನ್ನ ಪ್ಪಿ ದ್ದ ರು. ಅದರ ಬೆನ್ನಲ್ಲೇ ಮತ್ತೊಬ್ಬ ಟಾಪ್ ನಟನ ಸಾ ವು ಸಂಭವಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ್ದ ರನ್ನ ಚಿತ್ರದ ನಿರ್ಮಾಪಕ ಚಂದ್ರಶೇಖರ್ ಅವರು ಕೂಡ ಇತ್ತೀಚೆಗೆ ಕೊರೊನಾಕ್ಕೆ ಬ ಲಿ ಯಾಗಿದ್ದಾರೆ.

ನವರಸ ನಾಯಕ ಜಗ್ಗೇಶ್ ಅವರ ತಮ್ಮ ಕೋಮಲ್ ಅವರಿಗೂ ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆ ಸೇರಿದ್ದರು. ಈ ಮಧ್ಯೆ ಸ್ಯಾಂಡಲ್‌ವುಡ್ ಗೆ ಮತ್ತೊಂದು ಆಘಾತ ಎದುರಾಗಿದೆ. ಹೌದು ಬೆಟ್ಟದ ಹೂವು ಕನ್ನಡ ಚಿತ್ರದ ಮೂಲಕ ಚಿರಪರಿಚಿತರಾದ ಹಿರಿಯ ಚಲನ ಚಿತ್ರ ಪೋಷಕ ನಟ ಶಂಖನಾದ ಅರವಿಂದ್ 70) ಕೊರೊನಾ ಸೋಂಕಿನಿಂದ ನಿ ಧ ನ ರಾಗಿದ್ದಾರೆ.

13 ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ಅಂದಿನಿಂದ ಅರವಿಂದ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 1 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಬೆಟ್ಟದ ಹೂವು ಚಿತ್ರದಲ್ಲಿ ಶಂಖನಾದ್ ಅರವಿಂದ್ ಜೊತೆ ಪುನೀತ್ ರಾಜಕುಮಾರ್ ಬಾಲ್ಯ ನಟರಾಗಿ ನಟಿಸಿದ್ದರು. ಇದೀಗ ಅರವಿಂದ್ ಅವರ ಸುದ್ದಿ ಕೇಳಿ ಚಿಕ್ಕ ವಯಸ್ಸಿನಲ್ಲಿ ತನ್ನನ್ನ ಎತ್ತಿ ಆಡಿಸಿದ್ದ ಅಂಕಲ್ ಹೋಗಿಬಿಟ್ಟರೇ ಎಂದು ಪುನೀತ್ ಕಣ್ಣೀರಿಟ್ಟಿದ್ದಾರೆ.

ಶಂಖನಾದ ಅರವಿಂದ್ ಅವರು ಕಾಡಿನ ಬೆಂಕಿ, ಪ್ರಥಮ ಉಷಕಿರಣ, ಅನುಭವ ಸೇರಿದಂತೆ 250ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಕಲಾವಿದ ಅರವಿಂದ್ ಮೃ ತ‌ ಪಟ್ಟಿರುವ ಬಗ್ಗೆ ಅವರ ಪುತ್ರಿ ಮಾನಸ ಹೊಳ್ಳ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ. “ಸತತ 13 ದಿನಗಳು ಆಸ್ಪತ್ರೆಯಲ್ಲಿ ಹೋರಾಟ ನಡೆಸಿ ಇಂದು 1 ಗಂಟೆಗೆ ದೈವದೀನರಾಗಿದ್ದಾರೆಂದು ತಿಳಿಸಲು ವಿಶಾದಿಸುತ್ತೇನೆ. ನಮ್ಮ ತಂದೆಯವರು Shankhanaada Aravinda Kalarunda Aravind MA” ಎಂದು ಅವರು ಬರೆದುಕೊಂಡಿದ್ದಾರೆ. ಮೃ ತ ರು ಮೂವರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಮೊನ್ನೆ ಮೊನ್ನೆಯಷ್ಟೇ ಪುಟ್ಟಣ್ಣ ಕಣಗಾಲ್ ಪುತ್ರನೂ ಕರೋನಾ ದಿಂದ ಅಗಲಿದ್ದರು

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಅವರು ಕೂಡ ಕೊರೊನಾಗೆ ಬಲಿಯಾಗಿದ್ದಾರೆ. ರಾಮು ಅವರ ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾ ವ ನ್ನ ಪ್ಪಿ ದ್ದ ರು.

ರಾಮು ಕಣಗಾಲ್ ಅವರು ಭರತನಾಟ್ಯದಲ್ಲಿ ಪಾಂಡಿತ್ಯವನ್ನು ಪಡೆದುಕೊಂಡಿದ್ದರು. ಅಲ್ಲದೇ, ಕಣಗಾಲ್ ಹೆಸರಿನಲ್ಲಿ ನೃತ್ಯ ಶಾಲೆಯನ್ನು ನಡೆಸುತ್ತಿದ್ದರು. ಇವರು ಸಾಕಷ್ಟು ಚಿತ್ರಗಳಲ್ಲಿಯೂ ಬಣ್ಣ ಹಚ್ಚಿದ್ದಲ್ಲದೇ, ಕಿರುತೆರೆಯಲ್ಲೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ರಾಮು ಕಣಗಾಲ್, ಅರವಿಂದ್ ಅವರು ಇಂದು ನಮ್ಮೊಂದಿಗೆ ಇಲ್ಲ ಎಂಬುದು ನಿಜಕ್ಕೂ ವಿಷಾದನೀಯ ಎನಿಸುತ್ತದೆ.

Advertisement
Share this on...