ಈ ವೈದ್ಯ ಜೋಡಿಯ ಮದುವೆಯಾಗಿ ಕೇವಲ ಒಂದು ತಿಂಗಳಾಗಿತ್ತು, ರಾಷ್ಟೀಯ ವೈದ್ಯರ ದಿನದಂದೇ ನಡೆದೇಹೋಯ್ತು ದುರಂತ

in Kannada News/News 102 views

ಮುಂಬೈ:

Advertisement
ದೇಶದಾದ್ಯಂತ ನೆನ್ನೆ ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗಿದೆ. ಆದರೆ ಅಲ್ಲೊಂದು ವೈದ್ಯ ದಂಪತಿ ಮಾತ್ರ ತಮ್ಮ ಜೀವನವನ್ನೇ ಕೊನೆಗಾಣಿಸಿಕೊಂಡಿದ್ದಾರೆ. ಮದುವೆಯಾಗಿ ಒಂದು ತಿಂಗಳಲ್ಲೇ ದಾಂಪತ್ಯವೊಂದು ಕೊನೆಯಾಗಿದೆ.

ಮಹಾರಾಷ್ಟ್ರದ ಪುಣೆಯ ಅಂಕಿತಾ (26) ಹಾಗೂ ಆಕೆಯ ಪತಿ ನಿಖಿಲ್ ಶೆಂಡ್ಕರ್ (28) ಮೃ ತ ದು ರ್ದೈ ವಿ ಗಳು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಒಂದು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಮದುವೆಯಾದಾಗಿನಿಂದಲೂ ಅವರಿಬ್ಬರ ನಡುವೆ ಸಣ್ಣ ಪುಟ್ಟ ವಿಚಾರಕ್ಕೂ ಜ ಗ ಳ ಆಗುತ್ತಿತ್ತಂತೆ. ಪ್ರತಿ ದಿನ ಒಂದಿಲ್ಲೊಂದು ವಿಚಾರದಲ್ಲಿ ದಂಪತಿ ಜ ಗ ಳ ಆಡಿಕೊಳ್ಳುತ್ತಿದ್ದರಂತೆ.

ಬುಧವಾರ ನಿಖಿಲ್ ಕೆಲಸ ಮುಗಿಸಿ ಮನೆಗೆ ಬಂದು ಯಾರೊಂದಿಗೋ ಫೋನ್​ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಮತ್ತೆ ಗಂಡ ಹೆಂಡತಿ ನಡುವೆ ಜ ಗ ಳ ವಾಗಿದೆ. ಜ ಗ ಳ ತಾರಕಕ್ಕೇರಿದ್ದು, ಅಂಕಿತಾ ಮನೆಯಲ್ಲೇ ನೇ ಣಿ ಗೆ ಶ ರ ಣಾ ಗಿದ್ದಾಳೆ. ಅದಾದ ಸ್ವಲ್ಪ ಹೊತ್ತಿನಲ್ಲಿ ನಿಖಿಲ್ ಕೂಡ ನೇ ಣು ಬಿ ಗಿ ದು ಕೊಂಡು ಆ ತ್ಮ ಹ ತ್ಯೆ ಮಾ ಡಿ ಕೊಂ ಡಿ ದ್ದಾ ನೆ. ಸ್ಥಳಕ್ಕೆ ಬಂದ ಪೊಲೀಸರು, ಪರಿಶೀಲನೆ ನಡೆಸಿ, ಮೃ ತ ದೇ ಹ ಗಳನ್ನು ಮ ರ ಣೋ ತ್ತ ರ ಪರೀಕ್ಷೆಗೆ ಕಳುಹಿಸಿದ್ದಾರೆ. ಅದಾದ ನಂತರ ದೇ ಹ ಗಳನ್ನು ಅಂ ತ್ಯ ಸಂ ಸ್ಕಾ ರ ಮಾಡಲು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನನೂ ಓದಿ: ಕಂದನ ಮುಖ ನೋಡುವ ಮುನ್ನವೇ ತಂದೆಗೆ ಈ ಸ್ಥಿತಿ ಬರುತ್ತೇಂತ ಯಾರೂ ಊಹಿಸಿರಲಿಲ್ಲ, ಮಗು ಜನಿಸುವ‌ ಮುನ್ನವೇ ಹೆಂಡತಿ…. ಕಣ್ಣೀರು ತರಿಸುತ್ತೆ ಈ ಕಥೆ

ದಾವಣಗೆರೆ: ಅಯ್ಯೋ ವಿಧಿಯೇ ನೀನೆಷ್ಟು ಕ್ರೂರಿ… ಎಂದು ಪದೇಪದೆ ಹಿಡಿಶಾಪ ಹಾಕಬೇಕೆನ್ನಿಸುತ್ತೆ ಈ ಕರುಣಾಜನಕ ಸ್ಟೋರಿ ಕೇಳಿದ್ರೆ…

ಚನ್ನಗಿರಿ‌ ತಾಲೂಕಿನ ಸಂತೆಬೆನ್ನೂರು ಗ್ರಾಮದ ನಿವಾಸಿ ರೋಜಾ ತುಂಬು ಗರ್ಭಿಣಿ. ನಾಲ್ಕೈದು ದಿನದಲ್ಲಿ ಹೆರಿಗೆ ಆಗಲಿದ್ದು, ಇಡೀ ಕುಟುಂಬ ಪುಟ್ಟ ಕಂದನ ಸ್ವಾಗತಿಸಲು ಕಾಯುತಿತ್ತು. ರೋಜಾಳ ಗಂಡ ಸುರೇಶ್ ನಾಯ್ಕ ತನ್ನ ಮಗುವನ್ನ ಕಣ್ತುಂಬಿಕೊಳ್ಳಲು ಚಾತಕಪಕ್ಷಿಯಂತೆ ಕಾಯುತ್ತಿದ್ದ.

ಇಡೀ ಕುಟುಂಬ ಮಗು ಬರುವ ಸಂಭ್ರಮದಲ್ಲಿ ಮಿಂದೇಳಲು ತವಕಿಸುತ್ತಿತ್ತು. ಅಷ್ಟರಲ್ಲಿ ಎಂಟ್ರಿ ಕೊಟ್ಟ ಮಹಾಮಾರಿ ಕರೊನಾ ಸುರೇಶ್​ ನಾಯ್ಕನ ಪ್ರಾಣ ತೆಗೆದಿದೆ! ಮೂಲತಃ ಹೊಳಲ್ಕೆರೆ ತಾಲೂಕಿನ ಐನಹಳ್ಳಿ ಗ್ರಾಮ‌ದ ಸುರೇಶ್ ನಾಯ್ಕ, ಸಂತೆಬೆನ್ನೂರು ಬೆಸ್ಕಾಂ ಲೈನ್‌ ಮನ್ ಆಗಿ ಕೆಲಸ ಮಾಡುತ್ತಿದ್ದ. ಕರೊನಾ ಸೋಂಕು ತಗುಲಿದ್ದರಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ 10 ದಿನಗಳಿಂದ ಸುರೇಶ್​ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಗಂಡ ಗುಣಮುಖವಾಗಿ ಮನೆಗೆ ಬಂದೇ ಬರುತ್ತಾನೆ ಎಂದು ಬರುವ ದಾರಿಯನ್ನೇ ಕಾಯುತ್ತಿದ್ದ ಪತ್ನಿಗೆ ಗಂಡನ ಸಾವಿನ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿತು. ಜೂನ್ 3ರಂದು ರೋಜಾಗೆ ಹೆರಿಗೆ ದಿನಾಂಕವನ್ನ ವೈದ್ಯರು ಕೊಟ್ಟಿದ್ದಾರೆ.

ಇದನ್ನೂ ಓದಿ: ಒಂದೇ ದಿನ ತಾಯಿ-ತಂದೆ ಕೊರೋನಾಗೆ ಬಲಿ, ಅನಾಥವಾದ ಮಗು

ಚಾಮರಾಜನಗರದ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಕೊರೊನಾ ಸೋಂಕಿಗೆ ಪತಿ, ಪತ್ನಿ ಇಬ್ಬರೂ ಮೃತಪಟ್ಟಿರುವ ಘಟನೆ ನಡೆದಿದ್ದು, ಅವರ 5 ವರ್ಷದ ಮಗು ಅನಾಥವಾಗಿದೆ.

ಮೃತಪಟ್ಟವರನ್ನು ಆಟೋ ಚಾಲಕರಾಗಿದ್ದ ಗುರುಪ್ರಸಾದ್ (35) ಅವರ ಪತ್ನಿ ರಶ್ಮಿ (30) ಎಂದು ಗುರುತಿಸಲಾಗಿದೆ.

10 ದಿನಗಳ ಹಿಂದೆ ಗುರುಪ್ರಸಾದ್‌ಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲಾ ಕೊರೊನಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ನಾಲ್ಕೂ ದಿನಗಳ ಹಿಂದೆ ಮೃತಪಟ್ಟವರು. ಅವರ ಪತ್ನಿ ರಶ್ಮಿಗೂ ಸೋಂಕು ತಗುಲಿ ಹೋಂ ಐಸೋಲೇಷನ್ ಆಗಿದ್ದು, ಅವರು ರವಿವಾರ ಉಸಿರಾಟದ ಸಮಸ್ಯೆಯಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಇಬ್ಬರಿಗೂ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಮಗುವನ್ನು ರಶ್ಮಿ ತಂಗಿಯ ಮನೆಯಲ್ಲಿ ಇರಿಸಿದ್ದರು. ರಶ್ಮಿ ಹೋಂ ಐಸೋಲೇಷನ್‌ನಲ್ಲಿದ್ದರಿಂದ ಅವರ ತಂದೆ ತಾಯಿ ಕೊತ್ತಲವಾಡಿಯ ಮಗಳ ಮನೆಗೆ ಬಂದು ಆರೈಕೆ ಮಾಡುತ್ತಿದ್ದರು.

Advertisement
Share this on...