ಸಿನಿಮಾ ರಿಲೀಸ್ ಆಗಬೇಕಿದ್ದ ಖುಷಿಯಲ್ಲಿದ್ದ ಖ್ಯಾತ ನಟ ಹಾಗು ಚಿತ್ರದ ನಿರ್ದೇಶಕನ‌ ದಿಢೀರ್ ನಿಧನ: ಕಣ್ಣೀರಲ್ಲಿ ಸ್ಯಾಂಡಲ್‌ವುಡ್

in FILM NEWS/Kannada News/News 1,815 views

ಕೊರೊನಾ ಹಾವಳಿ ಎಲ್ಲೆಡೆ ಹೆಚ್ಚಳವಾಗುತ್ತಲೇ ಇದೆ. ದಿನದಿಂದ ದಿನಕ್ಕೆ ಸಾವಿನ ಸಂ‌ಖ್ಯೆಯೂ ಹೆಚ್ಚಾಗುತ್ತಲೇ ಇದೆ. ಯಾವುದೂ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಅತ್ತ ಸ್ಯಾಂಡಲ್ ವುಡ್ ನಲ್ಲಿ ಯಾವ ಸಿನಿಮಾ ನಿರ್ಮಾಣದ ಕಾರ್ಯವಾಗಲೀ, ಬಿಡುಗಡೆಯಾಗಲೀ ಆಗುತ್ತಿಲ್ಲ. ಹಾಗಾಗಿ ಸಿನಿಮಾಗೆ ಸಂಬಂಧಿಸಿದ ಯಾವುದೇ ಕೆಲಸ ಸಾಗದೇ ಸಿನಿಮಾಗಳನ್ನೇ ನಂಬಿಕೊಂಡವರು ಇಂದು ಬೀದಿಗೆ ಬೀಳುವ ಸಂದರ್ಭ ಎದುರಾಗಿದೆ.

Advertisement

ಇದೇ ವೇಳೆ ಕೋಟಿ ರಾಮು ಅವರಂತಹ ದೊಡ್ಡ ದೊಡ್ಡ ನಿರ್ಮಾಪಕರೇ ಸಾವಿಗೀಡಾಗುತ್ತಿದ್ದಾರೆ. ಚಿತ್ರರಂಗದ ಅನ್ನದಾತರೆನಿಸಿದ ರಾಮು ಅವರು ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಮತ್ತೊಬ್ಬ ಟಾಪ್ ನಟನ ಸಾವು ಸಂಭವಿಸಿತ್ತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ್ದ ರನ್ನ ಚಿತ್ರದ ನಿರ್ಮಾಪಕ ಚಂದ್ರಶೇಖರ್ ಅವರು ಕೂಡ ಇತ್ತೀಚೆಗೆ ಕೊರೊನಾಕ್ಕೆ ಬಲಿಯಾಗಿದ್ದರು.

ನವರಸ ನಾಯಕ ಜಗ್ಗೇಶ್ ಅವರ ತಮ್ಮ ಕೋಮಲ್ ಅವರಿಗೂ ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆ ಸೇರಿದ್ದರು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಅವರು ಕೂಡ ಕೊರೊನಾಗೆ ಬಲಿಯಾಗಿದ್ದರು. ರಾಮು ಅವರ ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವಪ್ಪಿದ್ದರು. ರಾಮು ಕಣಗಾಲ್   ಬಗ್ಗೆ ಮಾತನಾಡುವುದಾದರೆ ಅವರು ಭರತನಾಟ್ಯದಲ್ಲಿ ಪಾಂಡಿತ್ಯವನ್ನು ಪಡೆದುಕೊಂಡಿದ್ದರು. ಅಲ್ಲದೇ, ಕಣಗಾಲ್ ಹೆಸರಿನಲ್ಲಿ ನೃತ್ಯ ಶಾಲೆಯನ್ನು ನಡೆಸುತ್ತಿದ್ದರು. ಇವರು ಸಾಕಷ್ಟು ಚಿತ್ರಗಳಲ್ಲಿಯೂ ಬಣ್ಣ ಹಚ್ಚಿದ್ದಲ್ಲದೇ, ಕಿರುತೆರೆಯಲ್ಲೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ರಾಮು ಕಣಗಾಲ್ ಅವರು ಇಂದು ನಮ್ಮೊಂದಿಗೆ ಇಲ್ಲ ಎಂಬುದು ನಿಜಕ್ಕೂ ವಿಷಾದನೀಯ ಎನಿಸುತ್ತದೆ

ಸ್ಯಾಂಡಲ್ ವುಡ್ ಗೆ ಒಂದರ ಮೇಲೊಂದರಂತೆ ಕೊರೋನಾ ಹೊಡೆತ ಕೊಡುತ್ತಿದ್ದು ಇದೀಗ ಮತ್ತೊಬ್ಬ ನಟ ಹಾಗು ನಿರ್ದೇಶಕ ಕೊರೋನಾಗೆ ಬಲಿಯಾಗಿದ್ದಾರೆ. ಹೌದು ಸಿನಿಮಾ ತೆರೆಗೆ ಕಾಣುವ ಮೊದಲೇ ಸ್ಯಾಂಡಲ್‌ವುಡ್ ನಟ, ನಿರ್ದೇಶಕ​ ಇಬ್ಬರೂ ಕೊರೊನಾ​ಗೆ ಬಲಿಯಾಗಿದ್ದಾರೆ.

ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಏಪ್ರಿಲ್​ ತಿಂಗಳಲ್ಲಿ ಕೊರೊನಾದಿಂದ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊರೊನಾದಿಂದ ಮೃತಪಟ್ಟಿದ್ದಾರೆ.

34 ವರ್ಷದ ಅಭಿರಾಮ್​ ಕಳೆದೊಂದು ವಾರದಿಂದ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದರು. ಆದರೆ ಅವರು ಪರೀಕ್ಷೆ ಮಾಡಿಸಿಕೊಳ್ಳದೆ ಮನೆಯಲ್ಲೇ ಇದ್ದರು. ಇತ್ತೀಚೆಗೆ ಉಸಿರಾಟದ ತೊಂದರೆ ಅವರಲ್ಲಿ ಹೆಚ್ಚಾಗಿದ್ದು, ಶುಕ್ರವಾರ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಡಿ.ಎಸ್.‌ ಮಂಜುನಾಥ್ ‘ಸಂಯುಕ್ತ-2’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಮತ್ತು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಂತರ ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾವನ್ನು ನಿರ್ಮಿಸಿ ಹೆಸರು ಮಾಡಿದ್ದರು. ಸದ್ಯ ‘0% ಲವ್‌’ ಚಿತ್ರದಲ್ಲಿ ಹೀರೋ ಆಗಿ ಕೂಡ ನಟಿಸುತ್ತಿದ್ದರು. ‘ಸಂಯುಕ್ತ 2’ ಮತ್ತು ‘0% ಲವ್‌’ ಎರಡೂ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಅಭಿರಾಮ್.‌ ಈಗ ಅಭಿರಾಮ್ ಕೂಡಾ ಮಂಜುನಾಥ್‌ ಅವರನ್ನು ಹಿಂಬಾಲಿಸಿ ಹೊರಟಿದ್ದಾರೆ ಎನ್ನುವುದು ಬೇಸರದ ಸಂಗತಿ.

Advertisement
Share this on...