ಯಾರು ಎ.ಆರ್.ರೆಹಮಾನ್ ಅಂದ್ರೆ? ಭಾರತ ರತ್ನ ಪ್ರಶಸ್ತಿ ನಮ್ಮ ಕಾಲಿನ ಧೂಳಿಗೆ ಸಮ: ಖ್ಯಾತ ನಟ ಬಾಲಕೃಷ್ಣ

in FILM NEWS/Kannada News/News 1,714 views

ಹೈದರಾಬಾದ್:

Advertisement
ತೆಲುಗು ಚಿತ್ರರಂಗದ ಹಿರಿಯ ನಟ ಬಾಲಕೃಷ್ಣ ಅವರು ಸದಾ ಒಂದಲ್ಲಾ ಒಂದು ವಿ ವಾ ದದಿಂದಲೇ ಸುದ್ದಿಯಾಗುವುದು ಉಂಟು. ಅವರು ಕೋಪದಿಂದ ನೀಡುವ ಪ್ರತಿಕ್ರಿಯೆಗಳು, ಮಾತನಾಡುವಾಗ ಮಾತಿನ ಭರದಲ್ಲಿ ನೀಡುವ ಹೇಳಿಕೆಗಳು ಒಂದು ವಿ ವಾ ದದ ಕಿಡಿಯನ್ನು ಹೊತ್ತಿಸುತ್ತದೆ. ಇದೀಗ ಅಂತಹುದೋ ಮತ್ತೊಂದು ವಿ ವಾ ದವನ್ನು ನಟ ಬಾಲಕೃಷ್ಣ ಅವರು ಹುಟ್ಟು ಹಾಕಿದ್ದಾರೆ. ಭಾರತೀಯ ಸಿನಿಮಾಗಳಲ್ಲಿ ತನ್ನ ಸಂಗೀತದಿಂದ ಮೋಡಿ ಮಾಡಿರುವ, ಆಸ್ಕರ್ ಪ್ರಶಸ್ತಿ ವಿಜೇತರಾಗಿರುವ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಪರಿಚಯವನ್ನು ಪ್ರತ್ಯೇಕವಾಗಿ ನೀಡುವ ಅಗತ್ಯ ಇಲ್ಲ. ಏಕೆಂದರೆ ಅವರು ಅಷ್ಟೊಂದು ಜನಪ್ರಿಯತೆ ತನ್ನದಾಗಿಸಿಕೊಂಡಿಸಿದ್ದಾರೆ. ಆದರೆ ಇಂತಹ ಜನಪ್ರಿಯ ಸಂಗೀತ ನಿರ್ದೇಶಕ ಯಾರೆಂದೇ ತನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ನಟ ನಂದಮೂರಿ ಬಾಲಕೃಷ್ಣ ಅವರು ಒಂದು ಚರ್ಚೆಗೆ ಕಾರಣರಾಗಿದ್ದಾರೆ.

ತೆಲುಗು ಹಿರಿಯ ನಟ ಮತ್ತು ರಾಜಕಾರಣಿ ನಂದಮೂರಿ ಬಾಲಕೃಷ್ಣ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಹೌದಿ ಸದಾ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕವೇ ಟ್ರೋಲ್‍ಗೆ ಒಳಗಾಗುವ ತೆಲುಗು ಹಿರಿಯ ನಟ ಹಾಗೂ ರಾಜಕಾರಣ ನಂದಮುರಿ ಬಾಲಕೃಷ್ಣ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಯಾರೆಂದು ನನಗೆ ಗೊತ್ತಿಲ್ಲ. ಭಾರತ ರತ್ನ ನನ್ನ ತಂದೆ ಎನ್.ಟಿ.ರಾಮರಾವ್ ಅವರ ಕಾಲಿನ ಬೆರಳಿನ ಉಗುರಿಗೆ ಸಮ ಎಂದಿದ್ದಾರೆ. ಈ ಮೂಲಕ ಸಖತ್ ಟ್ರೋಲ್‍ಗೆ ಒಳಗಾಗಿದ್ದಾರೆ.

ನನಗೆ ಎ.ಆರ್.ರೆಹಮಾನ್ ಯಾರೆಂದು ಗೊತ್ತಿಲ್ಲ, ನಾನು ಕೇರ್ ಮಾಡುವುದಿಲ್ಲ. ದಶಕಗಳ ಹಿಂದೆ ಅವರು ಹಿಟ್ ಹಾಡುಗಳನ್ನು ನೀಡಿ ಆಸ್ಕರ್ ಅವಾರ್ಡ್ ಪಡೆದಿರಬಹುದು. ಆದರೆ ಆಸ್ಕರ್ ಪ್ರಶಸ್ತಿ ಮಾತ್ರವಲ್ಲ ಭಾರತ ರತ್ನವನ್ನೂ ನಾನು ಗೌರವಿಸುವುದಿಲ್ಲ. ಭಾರತ ರತ್ನ ನಮ್ಮ ತಂದೆ ಎನ್.ಟಿ.ರಾಮ ರಾವ್ ಅವರ ಕಾಲ್ಬೆರಳಿನ ಉಗುರಿಗೂ ಸಮವಿಲ್ಲ. ಎಲ್ಲ ಪ್ರಶಸ್ತಿಗಳು ನನ್ನ ಪಾದಕ್ಕೆ ಸಮ ಎಂದು ಹೇಳಿದ್ದಾರೆ.

ಟಾಲಿವುಡ್‍ಗೆ ನಮ್ಮ ಕುಟುಂಬ ನೀಡಿದ ಕೊಡುಗೆಯನ್ನು ಯಾವುದೇ ಪ್ರಶಸ್ತಿ ಸರಿದೂಗಿಸಲು ಸಾಧ್ಯವಿಲ್ಲ. ಪ್ರಶಸ್ತಿಗಳು ಮಾತ್ರ ಕೆಟ್ಟದ್ದನ್ನು ಅನುಭವಿಸಬೇಕು. ನನ್ನ ಕುಟುಂಬ ಅಥವಾ ನನ್ನ ತಂದೆ ಅಲ್ಲ ಎಂದು ಖಾರವಾಗಿ ಹೇಳಿದ್ದಾರೆ.

ಎ.ಆರ್.ರೆಹಮಾನ್ ಅವರು 1993ರಲ್ಲಿ ಬಾಲಕೃಷ್ಣ ಅವರ ನಿಪ್ಪು ರವ್ವಾ ಸಿನಿಮಾಗೆ ಹಿನ್ನೆಲೆ ಸಂಗೀತ ಕಂಪೋಸ್ ಮಾಡಿದ್ದರು. ಬಾಲಕೃಷ್ಣ ಅವರ ಸಂದರ್ಶನದ ವೀಡಿಯೋ ನೋಡುತ್ತಿದ್ದಂತೆ ರೆಹಮಾನ್ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ.

Advertisement
Share this on...