ಉತ್ತರಪ್ರದೇಶ ಚುನಾವಣೆ ಹಾಗು ಫಲಿತಾಂಶದ ಬಗ್ಗೆ ಅಚ್ಚರಿಯ ಭವಿಷ್ಯವಾಣಿ ನುಡಿದ ಪ್ರಶಾಂತ್ ಕಿಶೋರ್: ಆತಂಕದಲ್ಲಿ ವಿರೊಧಪಕ್ಷಗಳು

in Kannada News/News 542 views

ಇತ್ತೀಚೆಗೆ, ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯ ಬಳಿಕ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮತ್ತೊಂದೆಡೆ ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಕೆಲವರು ಮಾತನಾಡುತ್ತಿದ್ದಾರೆ. ಈ ಸುದ್ದಿಯ ಮೂಲಕ ಪ್ರಶಾಂತ್ ಕಿಶೋರ್ ಯಾವ ಹೇಳಿಕೆ ನೀಡಿದ್ದಾರೆ ಎನ್ನುವುದನ್ನು ತಿಳಿಸುತ್ತೇವೆ. ಬನ್ನಿ ಸಂಪೂರ್ಣ ಸುದ್ದಿಯನ್ನು ವಿವರವಾಗಿ ನೋಡೋಣ.

Advertisement

ದೇಶದ ಮುಂದಿನ ಪ್ರಧಾನಮಂತ್ರಿಯಾಗಬಹುದು ರಾಹುಲ್ ಗಾಂಧಿ

ಪತ್ರಕರ್ತೆ ನವಿಕಾ ಕುಮಾರ್ ಅವರಿಗೆ ಪ್ರಶಾಂತ್ ಕಿಶೋರ್ ಉತ್ತರಿಸುತ್ತಾ, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿಯಾಗಬಹುದು. ಅಷ್ಟೇ ಅಲ್ಲ, ಕಾಂಗ್ರೆಸ್ ಇಲ್ಲದೆ ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಕಾಂಗ್ರೆಸ್ ಪಕ್ಷದ ನೆರವು ಪಡೆಯಬೇಕು. ಅವರ ಈ ಹೇಳಿಕೆ ಬಳಿಕವೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶಾಂತ್ ಕಿಶೋರ್ ಈ ಹೇಳಕೆಗೆ ಹಲವಾರು ಜನರೂ ಒಪ್ಪಿಗೆ ಸೂಚಿಸುತ್ತಿದ್ದಾರೆ.

ಬಿಜೆಪಿಗೆ 2017 ಕ್ಕಿಂತಲೂ ಹೆಚ್ಚು ಸೀಟು ಸಿಗಬಹುದು

ಭಾರತೀಯ ಜನತಾ ಪಕ್ಷ (ಬಿಜೆಪಿ) ಕುರಿತು ಹೇಳಿಕೆ ನೀಡಿರುವ ಪ್ರಶಾಂತ್ ಕಿಶೋರ್, ಈ ಬಾರಿ 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 2017ರ ಚುನಾವಣೆಗಿಂತ ಹೆಚ್ಚು ಸ್ಥಾನ ಗಳಿಸಬಹುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಈ ಬಾರಿಯೂ ಭಾರತೀಯ ಜನತಾ ಪಕ್ಷದ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದ್ದಾರೆ. ಅವರು ರಾಹುಲ್ ಗಾಂಧಿ ಬಗ್ಗೆ ಹೇಳಿಕೆ ನೀಡಿದ ನಂತರ ಕೆಲವರು ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಬಹುದು ಎಂದು ಊಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ರಾಹುಲ್ ಗಾಂಧಿಗೆ ಆಹ್ವಾನ ನೀಡಿದ್ದರು ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲಿಲ್ಲ ಎಂದು ಹೇಳಿದ್ದಾರೆ.

ವಿಡಿಯೋ ಟ್ವೀಟ್ ಮಾಡಿದ ಟೈಮ್ಸ್ ನೌ

ಇಂಗ್ಲಿಷ್ ಸುದ್ದಿ ಚಾನೆಲ್ ಟೈಮ್ಸ್ ನೌ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ವೀಡಿಯೊವನ್ನು ಹಂಚಿಕೊಂಡಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಆದ ವೀಡಿಯೊದಲ್ಲಿ ಪ್ರಶಾಂತ್ ಕಿಶೋರ್ ಮತ್ತು ಪತ್ರಕರ್ತೆ ನವಿಕಾ ಕುಮಾರ್ ಪರಸ್ಪರ ಮಾತನಾಡುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾದ ವಿಡಿಯೋ ನೋಡಿ ಹಲವರು ಟ್ವೀಟ್ ಮಾಡಿದ್ದಾರೆ. ಮತ್ತೊಂದೆಡೆ ಕೆಲವರು ರಾಹುಲ್ ಗಾಂಧಿ ಬಗ್ಗೆ ತಮಾಷೆ ಮಾಡುತ್ತಿರುವುದೂ ಕಂಡು ಬರುತ್ತಿದೆ.

ರಾಹುಲ್ ಗಾಂಧಿ ಪ್ರಧಾನಿಯಾಗಲ್ಲ ಎಂದು ಈಗ ಯೂ-ಟರ್ನ್ ಹೊಡೆದ ಪ್ರಶಾಂತ್ ಕಿಶೋರ್ 

ಇತ್ತೀಚಿನ ದಿನಗಳಲ್ಲಿ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ ಅವರು ಈಗ ಕಾಂಗ್ರೆಸ್ ಇಲ್ಲದೇ ಇದ್ದರೆ ಪ್ರಬಲ ಪ್ರತಿಪಕ್ಷವಾಗುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ. ಇದೇ ವೇಳೆ ಪಕ್ಷಗಳನ್ನು ಒಟ್ಟುಗೂಡಿಸಿ ಬಿಜೆಪಿಯಿಂದ ಗೆಲ್ಲಲು ಸಾಧ್ಯವಿಲ್ಲ ಎಂದರು. ಬಿಜೆಪಿಯನ್ನು ಸೋಲಿಸಲು 4M- ಮೆಸೇಜ್, ಮೆಸೆಂಜರ್, ಮಿಷಿನರಿ ಮತ್ತು ಮೆಕ್ಯಾನಿಕ್‌ ನ ಅಗತ್ಯವಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದರು. ರಾಹುಲ್ ಗಾಂಧಿ ಪ್ರಧಾನಿಯಾಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಹೌದು ಎಂದರು.

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುವುದನ್ನು ತಡೆದವರು ಯಾರು? ಇದಕ್ಕೆ ಪ್ರತಿಕ್ರಿಯಿಸಿದ ಪ್ರಶಾಂತ್ ಕಿಶೋರ್, ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಜೊತೆ ಮಾತುಕತೆ ನಡೆಯುತ್ತಿದೆ. ರಾಹುಲ್ ಗಾಂಧಿ ನನಗೆ ಕರೆ ಮಾಡಿದಾಗ ನಾನು ಅವರನ್ನು ಭೇಟಿ ಮಾಡಲು ಹೋಗಿದ್ದೆ ಎಂದು ಹೇಳಿದರು. ಕಾಂಗ್ರೆಸ್ ಬಗ್ಗೆ ಪ್ಲಾನ್ ಹೇಳಿದ್ದೇನೆ, ಅದನ್ನ ಎಕ್ಸಿಕ್ಯೂಟ್ ಮಾಡೋದು ಬಿಡೋದು ಅವರಿಗೆ ಬಿಟ್ಟದ್ದು. ಕಾಂಗ್ರೆಸ್ ಸೇರುವ ಮನಸ್ಸು ಮಾಡಿದ್ದೆ. ಆದರೆ ಎರಡು ಮೂರು ವಿಷಯಗಳ ಬಗ್ಗೆ ನನ್ನ ಹಾಗು ಕಾಂಗ್ರೆಸ್ ಪಕ್ಷದ ನಡುವೆ ಸಹಮತ ಮೂಡದ ಕಾರಣ ಸೇರಲಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

Advertisement
Share this on...