ದುಡುಕಿ ನಿರ್ಧಾರ ತೆಗೆದುಕೊಂಡದ್ದಕ್ಕೆ ಕಿರುತೆರೆ ನಟಿ ರಂಜನಿ ಜೊತೆ ನಡೆದೇ ಹೋಯ್ತು ಈ ದುರ್ಘಟನೆ: ಪಶ್ಚಾತಾಪ ಪಡುತ್ತಿರುವ ನಟಿ ರಂಜನಿ, ಆಗಿದ್ದೇನು ಗೊತ್ತಾ?

in FILM NEWS/Kannada News/News/ಮನರಂಜನೆ 277 views

ಕಿರುತೆರೆಯ ಖ್ಯಾತ ನಟಿ ರಂಜನಿ ರಾಘವನ್ ಚಿತ್ರೀಕರಣ ಮುಗಿಸಿ ಮನೆಗೆ ವಾಪಸ್ ಹೋಗುವಾಗ ನಡೆದ ಭಯಾನಕ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದರು. ನಡೆದ ಘಟನೆಯನ್ನು ಅರ್ಧ ಮಾತ್ರ ವಿವರಿಸಿ ಅಭಿಮಾನಿಗಳಲ್ಲಿ ಮುಂದೇನಾಯ್ತು ಎನ್ನುವ ಕುತೂಹಲ ಕಾಯ್ದಿರಿಸಿದ್ರು. ಇದೀಗ ಪಾರ್ಟ್-2ನಲ್ಲಿ ಬಹಿರಂಗ ಪಡಿಸಿದ್ದಾರೆ.

Advertisement

ಅಂದಹಾಗೆ ರಂಜನಿ ಸದ್ಯ ಕನ್ನಡತಿ ಧಾರಾವಾಹಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೊರೊನಾ ಲಾಕ್ ಡೌನ್ ಕಾರಣ ಕನ್ನಡದ ಬಹುತೇಕ ಧಾರಾವಾಹಿ ತಂಡ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಬೀಡುಬಿಟ್ಟಿದ್ದಾರೆ. ಕನ್ನಡತಿ ಧಾರಾವಾಹಿ ತಂಡ ಕೂಡ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ಮಾಡುತ್ತಿದೆ. ರಾತ್ರಿ ಚಿತ್ರೀಕರಣ ಮುಗಿಸಿ ಹೋಟೆಲ್ ಗೆ ಹೊರಟ ರಂಜನಿ, ನಟ ಕಿರಣ್ ರಾಜ್ ಮತ್ತು ನಟಿ ಸಾರಾ ಅವರಿಗೆ ಆದ ಭಯಾನಕ ಅನುಭವವನ್ನು ರಂಜನಿ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. ಸುರಕ್ಷಿತವಾಗಿ ಮನೆಗೆ ತಲುಪಿದ್ರಾ? ಮುಂದೇನಾಯ್ತು?

ಶೂಟಿಂಗ್ ಮುಗಿಸಿ ರಾತ್ರಿ ಹೊರಟಿದ್ದ ಕನ್ನಡತಿ ತಂಡ

ರಂಜನಿ ಮತ್ತು ಧಾರಾವಾಹಿ ತಂಡ ಉಳಿದುಕೊಂಡಿದ್ದ ಹೋಟೆಲ್ ರೂಮ್ ತಲುಪಲು ಲಗೇಜ್ ಗಾಡಿಯಲ್ಲಿ ಹೊರಟಿದ್ದರು. ಪರಿಚಯವಿಲ್ಲದ ಊರಿನಲ್ಲಿ, ಪರಿಚಯವಿಲ್ಲದವರ ಗಾಡಿಯಲ್ಲಿ ಹೊರಟಿದ್ದರು. ಡ್ರೈವರ್ ಮಾಮೂಲಿ ದಾರಿ ಬಿಟ್ಟು ಬೇರೆ ದಾರಿಯಲ್ಲಿ ಹೊರಟಿದ್ದು ನೋಡಿ ರಂಜನಿ ರಾಘವನ್ ಭಯದಲ್ಲಿ ವಿಡಿಯೋ ಮಾಡಿದ್ದರು. ಕತ್ತಲು ಬೇರೆ ಡ್ರೈವರ್ ಎಲ್ಲಿಗೆ ಕರ್ಕೊಂಡು ಹೋಗ್ತಿದ್ದಾರೆ ಎಂದು ಗೊತ್ತಿಲ್ಲ ಎಂದಿದ್ದರು. ಇದೀಗ ಮುಂದೆ ಏನಾಯ್ತು ಅಂತ ಹೇಳಿದ್ದಾರೆ.

ಮಧ್ಯ ಸಡನ್ ಆಗಿ ಗಾಡಿ ನಿಂತಿತ್ತು

ಕತ್ತಲೆಯಲ್ಲಿ ಸುಮಾರು ಹದಿನೈದು ನಿಮಿಷ ಎದೆಬಡಿತ ಕಿವಿಗೆ ಕೇಳೋವಷ್ಟು ಟೆನ್ಶನ್ ನಲ್ಲಿ ಹೋಗ್ತಿರುವಾಗ ಮಧ್ಯೆ ಒಂದು ಕಡೆ ಗಾಡಿ ಸಡನ್ ಆಗಿ ನಿಂತಿತು. ಬರ್ತೀನ್ ಸರ್ ಡ್ರೈವರ್ ಗೆ 200 ರುಪಾಯಿ ಕೊಟ್ಬಿಡಿ. ಆ ಗಾಡಿಗೆ ಸಂಬಂಧಪಟ್ಟ ಕನ್ನಡದೋನು, ಅದೇ..ಕುಡುಕ, ಹೇಳಿ ಹೊರಟುಹೋದ. ಏನು ಆಗಲ್ಲ ಅನ್ನಿಸಿದ್ದು ಎಷ್ಟು ಸತ್ಯಾನೋ, ಅಕಸ್ಮಾತ್ ಆದ್ರೆ ಏನ್ ಮಾಡೋಕೂ prepared ಇರ್ಲಿಲ್ಲ ಅನ್ನೋದೂ ಅಷ್ಟೇ ಸತ್ಯ.

ಸೆಟ್‌ಗೆ ದಿನಾ ಪ್ರಾಪರ್ಟಿ ಸಾಗಿಸೋ ಗಾಡಿ

ಮತ್ತೆ ಇನ್ನೊಂದು ಹತ್ತು ನಿಮಿಷ ಅದೇ ದಾರೀಲಿ ಹೋಗ್ತಿರುವಾಗ ಸ್ಟ್ರೀಟ್ ಲೈಟ್ ಗಳು ಕಾಣಿಸಿ, ನನ್ನೊಳಗೂ ಲೈಟ್ ಆನ್ ಆಯ್ತು. Actually, ಆ ಲಗೇಜ್ ಆಟೋ ನಮ್ಮ ಸೆಟ್ ಗೆ ದಿನಾ ಪ್ರಾಪರ್ಟಿ ಸಾಗಿಸೋ ಗಾಡಿ ಆಗಿತ್ತಂತೆ, ಆ ಕನ್ನಡದೋನು ನಮ್ಮ ಸೆಟ್ ಹುಡುಗರಿಗೆ ಪರಿಚಯ, ನಾವಿಲ್ಲಿ ಶೂಟಿಂಗ್ ಮಾಡೋ ಅಷ್ಟು ದಿನ ಅವರಿಗೆ ನಮ್ಮವರ ಜೊತೆ ವ್ಯವಹಾರ ಇರುತ್ತೆ, ಹಾಗೆಲ್ಲ ನಮಗೆ ಏನೂ ತೊಂದ್ರೆ ಮಾಡೋಕಾಗಲ್ಲ ಅಂತ ಆಮೇಲೆ ಕಿರಣ್ ಹೇಳಿದ್ರು’

ದುಡುಕಿ ಏನನ್ನೂ ಮಾಡ್ಬಾರ್ದು

‘ಆದ್ರೂ ಆ ಒಂಟಿ ರೋಡ್ ನಲ್ಲಿ ಹಾಗೆ ಹೋಗಿದ್ದರ ಭಯ ಮಾತ್ರ ಕೇಳ್ಬೇಡಿ. ಒಟ್ನಲ್ಲಿ ನಾವು ನಮ್ಮ ಹೋಟೆಲ್ ಸುರಕ್ಷಿತವಾಗಿ ತಲುಪಿದ್ವಿ. Uff..! ದುಡುಕಿ ಏನನ್ನೂ ಮಾಡ್ಬಾರ್ದು, ರಿಸ್ಕ್ ತೊಗೊಂಡ್ರೂ calculated risk ತೊಗೋಬೇಕು ಅನ್ನೋದು ಈ ಕತೆಯ ನೀತಿ ಪಾಠ’ ಎಂದು ರಂಜನಿ ರಾಘವನ್ ದೀರ್ಘವಾಗಿ ವಿವರಿಸಿದ್ದಾರೆ.

ಇದನ್ನೂ ಓದಿ: ಕಳೆದ ಲಾಕ್‌ಡೌನ್ ನಲ್ಲೇ ಮದುವೆಯಾಯ್ತು ಎಂದ ನಟಿ ಸಂಜನಾ

ಡ್ರ ಗ್ಸ್ ಆ ರೋ ಪ ದ ಮೇಲೆ ಬಂ ಧಿ ತರಾಗಿದ್ದ ಸಂದರ್ಭದಲ್ಲಿ ನಟಿ ಗಲ್ರಾಣಿ ಮದುವೆ ವಿಚಾರ ಭಾರೀ ಸುದ್ದಿ ಮಾಡಿತ್ತು. ಆದರೆ ನಟಿ ಮಾತ್ರ ತಮ್ಮ ಮದುವೆ ವಿಚಾರವನ್ನು ಅಲ್ಲಗೆಳೆದಿದ್ದರು. ಇದೀಗ ತಾನು ಮದುವೆಯಾಗಿದ್ದೇನೆ ಎಂಬ ಸತ್ಯ ಬಾಯ್ಬಿಟ್ಟಿದ್ದಾರೆ.

ಹೌದು. ಕೊರೊನಾ ಸಂಕಷ್ಟದ ಈ ಸಮಯದಲ್ಲಿ ನಟಿ ಲೈಟ್ ಮೆನ್ ಸಂಘ ಮತ್ತು ಪ್ರೊಡಕ್ಷನ್ ಯೂನಿಟ್ ನ ಸದಸ್ಯರಿಗೆ ರೇಶನ್ ಕಿಟ್ ವಿತರಣೆ ಮಾಡಿದರು. ಈ ವೇಳೆ ಮಾತನಾಡುತ್ತಾ ತಮ್ಮ ಮದುವೆ ವಿಚಾರ ಬಿಚ್ಚಿಟ್ಟರು. ಕಳೆದ ಲಾಕ್ ಡೌನ್ ನಲ್ಲಿ ನನ್ನ ಮದುವೆಯಾಯ್ತು. ನಾನಾ ಕಾರಣಗಳಿಂದ ಮದುವೆ ಸಂಭ್ರಮವನ್ನ ನಿಮ್ಮೆಲ್ಲರ ಜೊತೆ ಹಂಚಿಕೊಳ್ಳೋಕೆ ಆಗಲಿಲ್ಲ. ದೊಡ್ಡದಾಗಿ ಸೆಲೆಬ್ರೇಷನ್ ಮಾಡಬೇಕು ಅನ್ಕೊಂಡಿದ್ದೆ ಎಂದರು.

ಚಿತ್ರರಂಗದ ಅಣ್ಣ-ತಮ್ಮಂದಿರಿಗೆ ಊಟ ಹಾಕಿಸೋಕೆ ಆಗಲಿಲ್ಲ ಅನ್ನೋ ಕೊರಗಿದೆ. ಆದರೆ ಪ್ಯಾಂಡಮಿಕ್ ಕಾಲದಲ್ಲಿ ಕುಟುಂಬದ ಜೊತೆ ಚರ್ಚಿಸಿ ಕೈಲಾದ ಸಹಾಯ ಮಾಡೋಕೆ ನಿರ್ಧರಿಸಿದ್ದೇವೆ. ಸಂಜನಾ ಗಲ್ರಾಣಿ ಫೌಂಡೇಷನ್ ವತಿಯಿಂದ ಕೈಲಾದ ಸಹಾಯ ಮಾಡ್ತಿದ್ದೀವಿ. ಎಲ್ಲರಿಗೂ ಕಿಟ್ ಕೊಡಲು ಆಗಲಿಲ್ಲ. ಭಗವಂತ ಶಕ್ತಿ ಕೊಟ್ರೆ ಕನ್ನಡ ಇಂಡಸ್ಟ್ರಿಯೇ ನನ್ನ ಮೊದಲ ಆದ್ಯತೆ ಎಂದು ತಿಳಿಸಿದರು.

ಬಯಲಾಗಿದ್ದ ಮದುವೆ ವಿಚಾರ:

ನಟಿ ಸಂಜನಾರನ್ನು ಪೊಲೀಸರು ಬಂಧಿಸಿದ್ದ ಸಂದರ್ಭದಲ್ಲಿ ಅವರ ಡ್ರ ಗ್ಸ್ ನಂಟಿನ ಜೊತೆ ಮದುವೆ ವಿಚಾರವೂ ಕೂಡ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಬಂಧನವಾಗುವ ಒಂದು ದಿನಕ್ಕೂ ಮೊದಲು ಬಾರಿ ನನಗಿನ್ನೂ ಮದುವೆಯಾಗಿಲ್ಲ. ನಾನು ಹುಡುಗಿ. ನನ್ನ ಬಗ್ಗೆ ಸುಳ್ಳು ವರದಿ ಮಾಡಬೇಡಿ ಎಂದು ಹೇಳಿ ಮದುವೆ ಸುದ್ದಿಗೆ ಬ್ರೇಕ್ ಹಾಕಿ ನುಣುಚಿಕೊಳ್ಳಲು ಸಂಜನಾ ಪ್ರಯತ್ನಿಸಿದ್ದರು.

ಮಾಧ್ಯಮಗಳ ಎದುರು ತನ್ನ ವಿ ರು ದ್ಧ ಇಲ್ಲ ಸಲ್ಲದ ಆ‌ ರೋ ಪ ಮಾಡಬೇಡಿ ಎಂದು ಕಣ್ಣೀರಿಟ್ಟಿದ್ದರು. ಆದರೆ ಒಂದು ವರ್ಷದ ಹಿಂದೆಯೇ ನಟಿ ಸಂಜನಾಗೆ ಮದುವೆ ಆಗಿದೆ ಎಂಬ ಸುದ್ದಿ ಈಗ ಹರಿದಾಡಲು ಆರಂಭವಾಗಿತ್ತು. ನಟಿ ಸಂಜನಾ ಒಂದು ವರ್ಷದ ಹಿಂದೆಯೇ ಮು ಸ್ಲಿಂ ಸಂಪ್ರದಾಯದಲ್ಲಿ ವೈದ್ಯ ಅಜೀಜ್ ಪಾಷ ಅವರೊಂದಿಗೆ ಮದುವೆಯಾಗಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಪೂರಕ ಎಂಬಂತೆ ಮದುವೆಯ ಫೋಟೋ ಕೂಡ ವೈರಲ್ ಆಗಿತ್ತು. ಅಜೀಜ್ ಪಾಷ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು, ಆಗಾಗ ಇಂದಿರಾನಗರದಲ್ಲಿರುವ ಸಂಜನಾ ಮನೆಗೆ ಬರುತ್ತಿದ್ದರು. ಮದುವೆಯ ಬಳಿಕ ಒಂದು ವರ್ಷದಿಂದ ಗಂಡನ ಜೊತೆಗೆ ಸಂಜನಾ ಇದ್ದರು. ಅಲ್ಲದೇ ಸಂಜನಾ ಮಾಡುತ್ತಿದ್ದ ಪಾರ್ಟಿಗಳಲ್ಲಿ ಅಜೀಜ್ ಪಾಷ ಭಾಗಿಯಾಗುತ್ತಿದ್ದರು ಎನ್ನಲಾಗಿತ್ತು.

Advertisement
Share this on...