“ಪ್ರಧಾನಿ ಮೋದಿಯನ್ನ ಎದುರಿಸುವವ ನಾಯಕನ್ಯಾರಾದರೂ ಇದ್ದರೆ ಅದು ರಾಹುಲ್ ಗಾಂಧಿ ಮಾತ್ರ, ಅವರೇ ಕಾಂಗ್ರೆಸ್ ಅಧ್ಯಕ್ಷರಗಾಬೇಕು”

in Kannada News/News 275 views

ದೇಶದ ಹಳೆಯ ರಾಜಕೀಯ ಪಕ್ಷ ಕಾಂಗ್ರೆಸ್ ಕಳೆದ ಕೆಲವು ವರ್ಷಗಳಿಂದ ರಾಜಕೀಯ ಬಿಕ್ಕಟ್ಟಿನಿಂದ ಹಾಗು ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದರೂ, ಪ್ರಸ್ತುತ, ಕಾಂಗ್ರೆಸ್ಸಿನ ಸ್ಥಾನವು ಒಂದು ಸಣ್ಣ ಪ್ರಾದೇಶಿಕ ಪಕ್ಷಕ್ಕಿಂತಲೂ ಕೆಟ್ಟದಾಗಿದೆ. ಬಲವಾದ ಉನ್ನತ ನಾಯಕತ್ವದ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿಬೀ ಮಟ್ಟಕ್ಕೆ ತಲುಪಿದೆ. ಈ ರಾಜಕೀಯ ಬಿಕ್ಕಟ್ಟಿನಿಂದ ಕಾಂಗ್ರೆಸ್ ಅನ್ನು ಹೊರತರಲು ಹೊಸ ನಾಯಕನನ್ನು ಆಯ್ಕೆ ಮಾಡುವ ಬಗ್ಗೆ ಪಕ್ಷದ ಹೈಕಮಾಂಡ್ ಗಂಭೀರವಾಗಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯನ್ನು ನಡೆಸುವ ಅಗತ್ಯವಿಲ್ಲ ಎಂದು ಪಕ್ಷದ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಗಾಂಧಿ ಕುಟುಂಬವು ಪಕ್ಷದ ನಾಯಕತ್ವವನ್ನು ನಿರ್ಧರಿಸಬೇಕು. ಸೋನಿಯಾ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತೆಗೆದುಕೊಳ್ಳುವ ನಿರ್ಧಾರವನ್ನು ಪಕ್ಷ ಸ್ವೀಕರಿಸುತ್ತದೆ ಎಂದಿದ್ದಾರೆ. ವಿಶೇಷವೆಂದರೆ, ಕಾಂಗ್ರೆಸ್ ಪಕ್ಷದ ಅಧಿಕಾರವು ಕಳೆದ ಹಲವು ದಶಕಗಳಿಂದ ಗಾಂಧಿ ಕುಟುಂಬದ ಕೈಯಲ್ಲೇ ಇದೆ.

Advertisement

ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್‌ನ ಉನ್ನತ ನೀತಿ ನಿರೂಪಣಾ ಘಟಕದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ, ರಾಹುಲ್ ಗಾಂಧಿ ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನ ಎದುರಿಸಬಲ್ಲ ಏಕೈಕ ಸಮರ್ಥ ವ್ಯಕ್ತಿ ಹಾಗು ಅವರು ಸದಾ ದೇಶದ ಜನರ ಸಮಸ್ಯೆಗಳ ಬಗ್ಗೆ ಪ್ರಶ್ನೆಗಳನ್ನ ಎತ್ತುತ್ತಿರುತ್ತಾರೆ ಎಂದು ಹೇಳಿದರು.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅದ್ಭುತ ಗೆಲುವು ದಾಖಲಿಸಿದ ನಂತರ ಮಮತಾ ಬ್ಯಾನರ್ಜಿ ಅವರ ರಾಜಕೀಯ ಸ್ಥಾನಮಾನವು ಪ್ರತಿಪಕ್ಷದ ಇತರ ಮುಖಂಡರಿಗಿಂತ ಹಲವು ಪಟ್ಟು ಹೆಚ್ಚಾಗಿದೆ. ಕಾಂಗ್ರೆಸ್ಸಿನ ಉನ್ನತ ನೀತಿ ನಿರೂಪಣಾ ಘಟಕದ ಕಾರ್ಯಕಾರಿ ಸಮಿತಿಯ ಸಭೆಯಲ್ಲೂ ಇದರ ಒಂದು ನೋಟ ಕಂಡುಬಂದಿದೆ.

ಕಾಂಗ್ರೆಸ್‌ನಲ್ಲಿ ಅಸಮಾಧಾನಗೊಂಡ ನಾಯಕರ ಗುಂಪು ಜಿ-23 (ಗ್ರೂಪ್ 23) ನಲ್ಲಿ, ಮಮತಾ ಬ್ಯಾನರ್ಜಿಯನ್ನು ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷದ ಮುಖವನ್ನಾಗಿ ಮಾಡುವ ಚರ್ಚೆಯೂ ತೀವ್ರಗೊಂಡಿದೆ. ರಾಷ್ಟ್ರಮಟ್ಟದಲ್ಲಿ ಮಮತಾ ಅವರನ್ನು ವಿರೋಧಪಕ್ಷದ ಮುಖವನ್ನಾಗಿ ಮಾಡಲು ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲವಾದರೂ, ದಿಗ್ವಿಜಯ್ ಸಿಂಗ್ ಪರೋಕ್ಷವಾಗಿ ಹಾಗೆ ಯೋಚಿಸುವವರ ವಿರುದ್ಧ ವಾಗ್ದಾಳಿ ನಡೆಸುತ್ತ ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರಾಗಿದ್ದಾರೆ. ಅವರು ನಿರಂತರವಾಗಿ ದೇಶದ ಜನರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಾರೆ ಎಂದು ಹೇಳಿದರು.

ಪಕ್ಷದ ಹೈಕಮಾಂಡ್ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯನ್ನು ಮುಂದೂಡಬೇಕೆಂದು ಒತ್ತಾಯಿಸಿದರು. ದಿಗ್ಗಿ ರಾಜಾ, 1969 ರಲ್ಲಿ ಕಾಂಗ್ರೆಸ್‌ನಲ್ಲಿ ನಡೆದ ವಿಭಜನೆಯ ನಂತರ, ಪಕ್ಷವನ್ನು ಮುನ್ನಡೆಸಲು ಇಂದಿರಾ ಗಾಂಧಿಯವರ ಪಾತ್ರವನ್ನ ಉಲ್ಲೇಖಿಸಿ, ಪಕ್ಷವು ನಿಮ್ಮದು ಎಂದು ಹೇಳಿದರು. ಆದ್ದರಿಂದ ಚುನಾವಣೆ ನಡೆಸುವ ಅಗತ್ಯವಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಮೂವರು ಒಟ್ಟಾಗಿ ಏನು ನಿರ್ಧರಿಸುತ್ತಾರೋ ಎಂಬುದನ್ನು ಪಕ್ಷ ಒಪ್ಪುತ್ತದೆ ಎಂದರು.

Advertisement
Share this on...