ಬಿಗ್ ಬ್ರೇಕಿಂಗ್: ತ್ರಿಪುರ ಸಿಎಂ ಬಿಪ್ಲವ್ ದೇವ್ ಹ ತ್ಯೆ ಗೆ ಯತ್ನ: ಕೂದಲೆಯ ಅಂತರದಲ್ಲಿ ಪಾರಾದ ಸಿಎಂ

in Kannada News/News 318 views

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹ ತ್ಯೆ ಗೆ ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ (ಆಗಸ್ಟ್ 5) ಸಂಜೆ ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ಶ್ಯಾಮ ಪ್ರಸಾದ್ ಮುಖರ್ಜಿ ಲೇನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಅವರ ಭದ್ರತಾ ವಲಯಕ್ಕೆ ನುಗ್ಗಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ಕಾರಿನಲ್ಲಿ ಮೂರು ಜನರಿದ್ದರು. ಈ ಅಪಘಾತದಲ್ಲಿ ಮುಖ್ಯಮಂತ್ರಿಯವರು ಕೂದಲೆಳೆಯ ಅಂತರದಲ್ಲಿ ಪಾರಾಗಿ ತಪ್ಪಿಸಿಕೊಂಡರೂ, ಅವರ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

Advertisement

ಸಿಎಂ ಭದ್ರತಾ ಪಡೆ ಆ ಕಾರನ್ನು ನಿಲ್ಲಿಸಲು ಯತ್ನಿಸಿತು, ಆದರೆ ಅವರು ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ. ನಂತರ, ಮೂವರನ್ನು ಕರ್ಚೌಮುಹನಿ ಪ್ರದೇಶದಿಂದ ಬಂಧಿಸಿ ಅವರ ಕಾರನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಆಗಸ್ಟ್ 6 ರಂದು ಮುಖ್ಯ ನ್ಯಾಯಿಕ ದಂಡಾಧಿಕಾರಿ ಪಿಪಿ ಪೌಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯದ ನಿರ್ಧಾರದ ನಂತರ, ಮೂವರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಕರೋನಾ ನೈಟ್ ಕರ್ಫ್ಯೂ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮೂವರು ಯುವಕರು ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೆ, ಅಕ್ರಮವಾಗಿ 6 ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದಿದ್ದಾರೆ. ಕುಡಿದ ಮತ್ತಿಬ್ಬರನ್ನು ನಿಲ್ಲಿಸಲು ಯತ್ನಿಸಿದಾಗ, ಅವರು ಪೊಲೀಸರ ಮೇಲೂ ಹ ಲ್ಲೆ ನಡೆಸಿದ್ದಾರೆ.

ತ್ರಿಪುರಾ ಸಿಎಂ ಕೊ ಲೆ ಗೆ ಯತ್ನ, ಅತಿ ವೇಗದ ಕಾರು ಚಾಲನೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಉದ್ದೇಶಪೂರ್ವಕವಾಗಿ ನೌಕರರಿಗೆ ಗಾಯ ಮಾಡುವುದು ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಮೂವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕಾರುಗಳು ಸೇರಿದಂತೆ ಅವರ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಮತ್ತು ಅವರ ಮನೆಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಮೂವರೂ ಆರೋಪಿಗಳ ವಯಸ್ಸು 20 ವರ್ಷಕ್ಕಿಂತ ಮೇಲ್ಪಟ್ಟಿದೆ. ಅವರು ಸಿಎಂ ನ್ನ ಕೊ ಲ್ಲ ಲು ಯಾಕೆ ಪ್ರಯತ್ನಿಸಿದರು ಎಂಬುದು ಇನ್ನೂ ತಿಳಿದು ಬಂದಿಲ್ಲ

Advertisement
Share this on...